5:56 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

45 ಲಕ್ಷ ರೂ. ವೆಚ್ಚದಲ್ಲಿ ಮಹಮಾಯಿ ದೇವಸ್ಥಾನ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

11/08/2021, 21:52

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ರಥಬೀದಿ ಮಹಮಾಯಿ ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕರು, ರಥಬೀದಿ ಮಹಮ್ಮಾಯಿ ಕೆರೆಯು ಅತ್ಯಂತ ಪುರಾತನ ಕೆರೆಯಾಗಿದ್ದು, ವರ್ಷಂಪ್ರತಿ ಗಣೇಶೋತ್ಸವ ಮತ್ತು ದಸರಾ ಸಂದರ್ಭದಲ್ಲಿ ನೂರಾರು ವಿಗ್ರಹಗಳನ್ನು ಕೆರೆಯಲ್ಲಿ ವಿಸರ್ಜಿಸಲಾಗುತ್ತಿದೆ. ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 45 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಶೀಘ್ರದಲ್ಲೇ ಕೆರೆಯ ನವೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. 

ಬೆಳೆಯುತ್ತಿರುವ ನಗರದಲ್ಲಿ ಈ ಹಿಂದಿನ ಕಾಲದಲ್ಲಿ ಸಮೃದ್ಧವಾಗಿದ್ದ ಕೆರೆಗಳು ಜೀರ್ಣಾವಸ್ಥೆ ತಲುಪಿದ್ದು ಅವುಗಳೆಲ್ಲವನ್ನೂ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಕೆಲವೊಂದು ಕೆರೆಗಳನ್ನು ಗುರುತಿಿದ್ದು ಅವುಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಯಶ್ರೀ ಕುಡ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ‌ರ ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ದೇವಸ್ಥಾನದ ಪ್ರಮುಖರಾದ ಗೋವಿಂದ ಪೈ, ಶ್ರೀನಿವಾಸ್ ಎಸ್.ಕಾಮತ್, ಮಾರೂರು ಸುಧೀರ್ ಪೈ, ಪ್ರಕಾಶ್ ಕಾಮತ್, ಎಂ. ನಾಗೇಶ್ ಭಟ್, ಅರ್ಚಕರಾದ ಎಂ. ವಿಠಲ್ ಭಟ್, ಎಂ ಶಿವಾನಂದ ಭಟ್,ಎಂ ವಿವೇಕ್ ಭಟ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಸುರೇಶ್ ವಿ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು