3:21 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

45ನೇ ವಯಸ್ಸಿನಲ್ಲಿ ಮಗು ಹೆತ್ತು 2 ದಿನಗಳ ಹಸುಗೂಸಿನ ಮಾರಾಟ: ದಂಪತಿ ಸಹಿತ 3 ಮಂದಿ ಬಂಧನ

29/05/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಎರಡು ದಿನಗಳ ಹಸುಗೂಸನ್ನು ಮಾರಾಟ ಮಾಡಿದ ಆರೋಪದ ಮೇಲೆ ಮಗುವಿನ ಹೆತ್ತವರು ಹಾಗೂ ಸಹಕರಿಸಿದ ನಿವೃತ್ತ ನರ್ಸ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ ಘಟನೆ
ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ನಡೆದಿದೆ.
ರತ್ನ-ಸದಾನಂದ ದಂಪತಿ ಹಾಗೂ ನಿವೃತ್ತ ನರ್ಸ್ ಕುಸುಮಾ ಅವರು
ಮಗು ಮಾರಾಟಮಾಡಿ ಪೊಲೀಸರಿಗೆ ಅತಿಥಿಯಾದ ಆರೋಪಿಗಳು.
ರತ್ನ-ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ನರನ್ನ ಮಾರಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ರತ್ನಾ ಅವರು ತನ್ನ 45ನೇ ವಯಸ್ಸಿನಲ್ಲಿ ಮಗುವನ್ನು ಹೆತ್ತು, 2 ದಿನಗಳ ಹಸುಗೂಸನ್ನು 1 ಲಕ್ಷ ರೂಪಾಯಿಗೆ
ಮಾರಾಟ ಮಾಡಿದ್ದಾರೆ. ಕುಸುಮಾ ಅವರು ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಿದ್ದರು. ಮಗುವನ್ನು ನಿವೃತ್ತ ನರ್ಸ್ ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಾರಾಟ ಮಾಡಲಾಗಿದೆ.
ಎನ್.ಆರ್. ಪುರ ಪೊಲೀಸರಿಂದ ಮಗು ರಕ್ಷಣೆ ಮಾಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿ ಮಗು ಇದೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು