7:06 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

5 ಲಕ್ಷ ರೂ.ಲಂಚ ಸ್ವೀಕಾರ: ಬಜಪೆಯ ಖಾಸಗಿ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಬಲೆಗೆ

07/07/2023, 20:40

ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದಾಗ ಸರಕಾರಿ ಅಧಿಕಾರಿಗಳು ಸಿಕ್ಕಿ ಬಿದ್ದಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲೊಬ್ಬ ಶಾಲಾ ಸಂಚಾಲಕಿಯೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಇದೆಲ್ಲ ನಡೆದಿರುವುದು ನಮ್ಮೂರಿನಲ್ಲಿಯೇ. ಮಂಗಳೂರು ಹೊರವಲಯದ ಬಜಪೆ ಸಮೀಪದ
ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ ನಿವೃತ್ತಿಯಾಗುತ್ತಿರುವ ಶಿಕ್ಷಕಿ ಶೋಭಾರಾಣಿ ಅವರ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಇಂದು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಾಲಾ ಸಂಚಾಲಕಿಯನ್ನು ಜ್ಯೋತಿ ಪೂಜಾರಿ ಅವರನ್ನು ಬಂಧಿಸಿದ್ದಾರೆ.
ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಜ್ಯೋತಿ ಪೂಜಾರಿ
ಬಂಧನಕ್ಕೀಡಾಗಿದ್ದಾರೆ. ಲೋಕಾಯಯಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ಹಾಗೂ ಕಲಾವತಿ, ಇನ್ಸೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು