3:03 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್ ಪ್ರತಿಭಟನೆ

15/01/2025, 17:31

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲಿನಲ್ಲಿ 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದವನನ್ನು ಕೂಡಲೇ ಬಂಧಿಸಲು
ಆಗ್ರಹಿಸಿ ಎಐಎಂಎಸ್ಎಸ್ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಎಐಎಂಎಸ್ಎಸ್ ನ ಜಿಲ್ಲಾಧ್ಯಕ್ಷರಾದ ಕೆ. ಎಂ. ಈಶ್ವರಿ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತಾ,ಕಾರ್ಖಾನೆಯಲ್ಲಿ ಕೆಲಸಕ್ಕೆಂದು ಜಾರ್ಖಂಡದಿಂದ ತೋರಣಗಲ್ಲಿಗೆ ಬಂದು ನೆಲೆಸಿದ್ದ ದಂಪತಿಯ ಐದು ವರ್ಷದ ಕಂದಮ್ಮ ಮನೆಯ ಬಳಿ ಮಕ್ಕಳೊಂದಿಗೆ
ಆಟವಾಡುತ್ತಿತ್ತು. ಈ ವೇಳೆ ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯದಿಂದಾಗಿ ಆಂತರಿಕ ಗಾಯಗಳಾಗಿದ್ದು
ತೀವ್ರ ರಕ್ತಸ್ರಾವದಿಂದ ನಲುಗುತ್ತಿದ್ದ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅತ್ಯಾಚಾರ ನಡೆದಿರುವುದು ವೈದ್ಯಕೀಯ ಮೂಲಗಳಿಂದ ದೃಢಪಟ್ಟು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಎರಡು ದಿನಗಳಾದರೂ ಕೂಡ ಅತ್ಯಾಚಾರಿಯನ್ನು ಬಂಧಿಸಿಲ್ಲ. ಜಿಲ್ಲಾಡಳಿತ ಈ ಕೂಡಲೇ
ಅತ್ಯಾಚಾರಿಯನ್ನು ಬಂಧಿಸಿ, ಅತ್ಯುಗ್ರ ಶಿಕ್ಷೆಯನ್ನು ಖಾತ್ರಿಪಡಿಸಿ, ಮಗುವಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಮಗುವಿನ ಭವಿಷ್ಯದ ಎಲ್ಲಾ ಜವಾಬ್ದಾರಿಗಳನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಎಂಎಸ್ಎಸ್ ನ ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ “ಬೆಂಗಳೂರಿನಲ್ಲಿಯೂ ಕೂಡ ಆರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ನಡೆದ ಬಗ್ಗೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಅವ್ಯಾಹತವಾಗಿ ಹೆಚ್ಚಾಗುತ್ತಿವೆ. ಸಾಮಾಜಿಕ
ಮಾಧ್ಯಮ, ಇಂಟರ್ನೆಟ್, ಟಿವಿಗಳ ಮೂಲಕ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ ಮತ್ತು ಮದ್ಯ ಮಾದಕ ವಸ್ತುಗಳು ಇಂತಹ ಅಪರಾಧಗಳಿಗೆ ಕಾರಣವಾಗುತ್ತಿವೆ. ಇನ್ನೊಂದೆಡೆ ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಈ ಸಾಂಸ್ಕೃತಿಕ ಅಧಪತನದಿಂದಾಗಿ ವಿದ್ಯಾರ್ಥಿ- ಯುವಜನರು ಇಂತಹ ಹೀನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಪ್ರಪಂಚವರಿಯದ ಪುಟ್ಟ ಕಂದಮ್ಮನ ಮೇಲೂ ಕ್ರೌರ್ಯ ಎಸಗುವ ಪಶುತ್ವದ ಮಟ್ಟಕ್ಕೆ ತಲುಪುತ್ತಿದ್ದಾರೆ. ಈ ಎಲ್ಲದಕ್ಕೂ ನೈತಿಕ ಜವಾಬ್ದಾರರಾಗಿರುವ ಸರ್ಕಾರಗಳು ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣವನ್ನು ಕಲ್ಪಿಸಬೇಕು, ಅಶ್ಲೀಲ ಸಿನಿಮಾ-
ಸಾಹಿತ್ಯಗಳನ್ನು ನಿಷೇಧಿಸಬೇಕು,ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ಖಾತ್ರಿಪಡಿಸಿ ಮತ್ತೆ ಇಂತಹ ಅಪರಾಧಗಳು ಮರುಕಳಿಸದಂತೆ ಕ್ರಮ
ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಎಐಎಂಎಸ್ಎಸ್ ನ ಪದಾಧಿಕಾರಿಗಳಾದ ಪದ್ಮಾ, ವಿದ್ಯಾ, ಗಿರಿಜಾ, ಸೌಮ್ಯ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಎಐಎಂಎಸ್ಎಸ್ ನ ಜಿಲ್ಲಾ ಜಂಟಿ ಕಾರ್ಯದರ್ಶಿ ವಿದ್ಯಾವತಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು