11:17 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು