3:10 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು