10:01 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

50 ಲಕ್ಷ ರೂ. ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಡಿಸಿಎಂ ಲಕ್ಷ್ಮಣ ಸವದಿ

13/05/2021, 15:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ  ಆಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಕೊರೋನ ಮಹಾಮಾರಿಯಿಂದ ಹೊರಗಡೆ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50  ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು  ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಆಕ್ಸಿಜನ್  ಕಾನ್ಸಟ್ರೇಟರ್ ಕಿಟ್ ಜೊತೆಗೆ ಜ್ವರ ಪರೀಕ್ಷೆ ಮಾಡುವ ಥರ್ಮಾಮೀಟರ್, ಸ್ಯಾಚು ರೇಷನ್ ಹಾಗೂ ಪಲ್ಸ್ ಚೆಕ್ ಮಾಡುವ ಆಕ್ಸಮೀಟರ್ ಉಳ್ಳ ಕಿಟ್ ಗಳನ್ನು ಕೂಡ ನೀಡಲಾಗುತ್ತಿದೆ.

ಕೋವಿಡ್ ಅಂತ ಮಹಾಮಾರಿ ಇಂದಾಗಿ ಅಥಣಿಯ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧೋಪಚಾರಗಳು ಸಿಗದೆ ಸಂಕಷ್ಟ ಪರಿಸ್ಥಿತಿಯಲ್ಲಿ ಇರುವ ಜನತೆಗೆ ಸುಸಜ್ಜಿತ   ಆಕ್ಸಿಜನ್  ಕಾನ್ಸಟ್ರೇಟರ್  ಹಾಗೂ ಬೆಡ್ ನೀಡುವ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುವ ಮುಖೇನ ಅಳಿಲು ಸೇವೆ ಮಾಡುತ್ತಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಕೋರೋನ ಬಂದಿದೆ ಎಂದು  ಉದಾಸೀನತೆ ತೋರದೆ ಕೂಡಲೇ ಚಿಕಿತ್ಸೆ ಪಡೆಯಬೇಕು. ಯಾರು ಧೈರ್ಯಗೆಡಬಾರದು, ಭಯದಿಂದಾಗಿಯೇ ಅನೇಕ ಜನ ಜೀವ ತೆತ್ತಿರುವ ಉದಾಹರಣೆ ನಮ್ಮ ಕಣ್ಣಮುಂದಿದೆ  ಇದರಿಂದಾಗಿ ಜನತೆ ತಮ್ಮ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು