9:08 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

52 ಲಕ್ಷ ವೆಚ್ಚದಲ್ಲಿ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

28/12/2022, 21:18

ಸುರತ್ಕಲ್ (reporterkarnataka.com):
52 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಆಡಳಿತಾತ್ಮಕವಾಗಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರವಾಸೋದ್ಯಮ, ಮೂಲಸೌಕರ್ಯ, ನೀರಾವರಿ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ. ವಾರ್ಡ್ 7ರಲ್ಲಿ ಲೋಕೋಪಯೋಗಿ, ನೀರಾವರಿ, ಪಾಲಿಕೆ, ರಾಜ್ಯದ ವಿಶೇಷ ಅನುದಾನದಡಿ ಈವರೆಗೆ 4.50 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ ಎಂದರು.

ಅಡ್ಯಾರು ಪ್ರದೇಶದ ಕಂದಾಯ ವಿಭಾಗವನ್ನು ಗುರುಪುರ ಹೋಬಳಿಯಿಂದ ಮಂಗಳೂರು ಹೋಬಳಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಸ್ಥಳೀಯ ಜನತೆಗೆ ಸಮಯ ಉಳಿತಾಯ ಹಾಗೂ ಕಡತ ವಿಲೇವಾರಿ ಸರಳವಾಗಲಿದೆ ಎಂದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ನಯನ ಆರ್.ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್,ಜಯಂತ ಕರ್ಕೇರ,ಜಯಂತ ಸಾಲಿಯಾನ್,ದೀಪಕ್ ಅಮೀನ್,ಕೇಶವ ಕುಂದರ್ ಅಶೋಕ್ ಪುತ್ರನ್,ವಿಠ್ಠಲ್, ಧೀರಜ್,ಪ್ರವೀಣ್ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು