3:18 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

53ನೇ ಬಜಾಲ್ ವಾರ್ಡ್: 1 ಕೋಟಿ ವೆಚ್ಚದ 15ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ

19/10/2025, 21:01

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ಅತೀ ಅಗತ್ಯವಿರುವ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ, ಕಾಲುದಾರಿ, ಆರ್.ಸಿ.ಸಿ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನವನ್ನು ಹೊಂದಿಸಿಕೊಂಡು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೆ ತಡೆ ನೀಡಿತ್ತು. ಈ ಬಗ್ಗೆ ನಿರಂತರವಾಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಇಲ್ಲಿ ನಡೆಯಬೇಕಿರುವ ತುರ್ತು ಕಾಮಗಾರಿಯ ಬಗ್ಗೆ ಮನವರಿಕೆ ಮಾಡಿದ ಪರಿಣಾಮ ಇದೀಗ ಮತ್ತೆ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿಗೆ ಚಾಲನೆ ದೊರೆತಿದೆ ಎಂದರು.

ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿಗೆ ಯಾವುದೇ ಅನುದಾನ ದೊರೆಯುತ್ತಿಲ್ಲವಾಗಿದ್ದು, ಕ್ಷೇತ್ರದ ಇತರೆಡೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅದಾಗ್ಯೂ ಈ ಬಗ್ಗೆ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ, ರಾಮ್ ಪ್ರಸಾದ್, ವರುಣ್ ಅಂಬಟ್, ಭಾಸ್ಕರ ಚಂದ್ರ ಶೆಟ್ಟಿ, ಗಣೇಶ್, ಚಂದ್ರಶೇಖರ್, ಶಿವಾಜಿ ರಾವ್, ಹರಿ ಕೇಶವ, ಸುರೇಶ್ ರಾವ್, ವಿಜಯ, ಅಮರ್ ಶೆಟ್ಟಿ, ಚಂದ್ರ, ಅಜಿತ್ ಪಾಟೀಲ್, ಯೋಗೀಶ್, ಜಗದೀಶ್, ರೋಹಿಣಿ, ಲೋಲಾಕ್ಷಿ, ಕವಿತಾ, ಲಕ್ಷ್ಮಿ ನಾರಾಯಣ, ಯಾದವ ಗಾಣದಬೆಟ್ಟು, ಗಂಗಾಧರ್, ಸೀತಾರಾಮ್, ಕಮಲಾಕ್ಷ, ಶೋಭಾ ಪಲ್ಲಕೆರೆ, ಯಮುನಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು