6:47 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಂಕುಸ್ಥಾಪನೆ

07/09/2022, 23:29

ಮಂಗಳೂರು(reporterkarnataka.com): ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.

ಅವರು ಬುಧವಾರ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 56ನೇ ಮಂಗಳದೇವಿ ವಾರ್ಡಿನಲ್ಲಿ ಮಂಗಳಾ ದೇವಿ ಬಸ್ ಟರ್ಮಿನಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ನಗರ ಪಾಲಿಕೆ ಸಿಬ್ಬಂದಿಗಳಿಗೆ ನೂತನ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ನಗರವಾಗಿರುವ ಮಂಗಳೂರಿನ ಅಭಿವೃದ್ದಿಗೆ ಸರ್ಕಾರಗಳು ಬದ್ದವಾಗಿವೆ. ಈ ದಿಸೆಯಲ್ಲಿ ನಗರಕ್ಕೆ ಅಗತ್ಯವಿರುವ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನ ಮಾಡಲಾಗುತ್ತಿದೆ, ಮಂಗಳಾದೇವಿ ದೇವಸ್ಥಾನದ ಮುಖ್ಯರಸ್ತೆ ಬದಿಯಲ್ಲಿ ಬಸ್‍ಗಳು ನಿಲ್ಲುವುದರಿಂದ ಓಡಾಡುವ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ನಗರಪಾಲಿಕೆ ಸಿಬ್ಬಂದಿಗಳ ವಸತಿಗೃಹ ಹಳೆಯದಾಗಿದ್ದು ವಾಸಿಸಲು ಕಷ್ಟವಾಗುತ್ತದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ವೈದ್ಯ ಚಿಕಿತ್ಸಾಲಯಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಆದ್ದರಿಂದ 4. 98 ಕೋಟಿ ರೂ.ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ಬಸ್ ಟರ್ಮಿನಲ್ ಮತ್ತು 2 ಕೋಟಿ ರೂ.ಗಳಲ್ಲಿ ನಗರ ಪಾಲಿಕೆ ಸಿಬ್ಬಂದಿಗಳ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದವರು ಹೇಳಿದರು.


ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್, ಮುಖಂಡರಾದ ರವಿಶಂಕರ್ ಮೀಜಾರು, ನಿತಿನ್ ಕುಮಾರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು