1:55 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಂಕುಸ್ಥಾಪನೆ

07/09/2022, 23:29

ಮಂಗಳೂರು(reporterkarnataka.com): ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.

ಅವರು ಬುಧವಾರ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 56ನೇ ಮಂಗಳದೇವಿ ವಾರ್ಡಿನಲ್ಲಿ ಮಂಗಳಾ ದೇವಿ ಬಸ್ ಟರ್ಮಿನಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ನಗರ ಪಾಲಿಕೆ ಸಿಬ್ಬಂದಿಗಳಿಗೆ ನೂತನ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ನಗರವಾಗಿರುವ ಮಂಗಳೂರಿನ ಅಭಿವೃದ್ದಿಗೆ ಸರ್ಕಾರಗಳು ಬದ್ದವಾಗಿವೆ. ಈ ದಿಸೆಯಲ್ಲಿ ನಗರಕ್ಕೆ ಅಗತ್ಯವಿರುವ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನ ಮಾಡಲಾಗುತ್ತಿದೆ, ಮಂಗಳಾದೇವಿ ದೇವಸ್ಥಾನದ ಮುಖ್ಯರಸ್ತೆ ಬದಿಯಲ್ಲಿ ಬಸ್‍ಗಳು ನಿಲ್ಲುವುದರಿಂದ ಓಡಾಡುವ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ನಗರಪಾಲಿಕೆ ಸಿಬ್ಬಂದಿಗಳ ವಸತಿಗೃಹ ಹಳೆಯದಾಗಿದ್ದು ವಾಸಿಸಲು ಕಷ್ಟವಾಗುತ್ತದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ವೈದ್ಯ ಚಿಕಿತ್ಸಾಲಯಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಆದ್ದರಿಂದ 4. 98 ಕೋಟಿ ರೂ.ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ಬಸ್ ಟರ್ಮಿನಲ್ ಮತ್ತು 2 ಕೋಟಿ ರೂ.ಗಳಲ್ಲಿ ನಗರ ಪಾಲಿಕೆ ಸಿಬ್ಬಂದಿಗಳ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದವರು ಹೇಳಿದರು.


ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್, ಮುಖಂಡರಾದ ರವಿಶಂಕರ್ ಮೀಜಾರು, ನಿತಿನ್ ಕುಮಾರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು