8:05 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

13/07/2021, 16:23

ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರು 6 ರಾಜ್ಯಗಳ ಸಿಎಂ ಜತೆ ಸದ್ಯದ ಕೊರೊನಾ ಪರಿಸ್ಥಿತಿ ಮತ್ತು ಮುಂದೆ ಬರಬಹುದಾದ 3ನೇ ಅಲೆ ತಡೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.

ಜುಲೈ 16ರ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪಾಲ್ಗೊಳ್ಳಲಿದ್ದಾರೆ. ಜತೆಗೆ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಮುಖ್ಯಮಂತ್ರಿಗಳು ಸಹ ಭಾಗವಹಿಸುವರು. ರಾಜ್ಯದಲ್ಲಿ ಇದೇ 19ರಂದು ಅನ್ ಲಾಕ್ 3.O ಅಂತ್ಯಗೊಳ್ಳಲಿದ್ದು, ಮುಂದೇನು ಎನ್ನುವ ಪ್ರಶ್ನೆಗೂ ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ.

ಅನ್ ಲಾಕ್ ನಂತರ ವಿವಿಧ ರಾಜ್ಯಗಳಲ್ಲಿ ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕುರಿತು ಪ್ರಧಾನಿ ಮೋದಿ ಈಗಾಗಲೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮತ್ತೆ ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ಕ್ರಮದ ಕುರಿತು ಸಲಹೆ ನೀಡುವ ಸಾಧ್ಯತೆ ಇದೆ.

ಮಂಗಳವಾರ ಈಶಾನ್ಯದ 8 ರಾಜ್ಯಗಳ ಜೊತೆ ಪ್ರಧಾನಿ ಚರ್ಚೆ ನಡೆಸಿದ್ದು, ಹಲವು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು