7:34 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

13/07/2021, 16:23

ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರು 6 ರಾಜ್ಯಗಳ ಸಿಎಂ ಜತೆ ಸದ್ಯದ ಕೊರೊನಾ ಪರಿಸ್ಥಿತಿ ಮತ್ತು ಮುಂದೆ ಬರಬಹುದಾದ 3ನೇ ಅಲೆ ತಡೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.

ಜುಲೈ 16ರ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪಾಲ್ಗೊಳ್ಳಲಿದ್ದಾರೆ. ಜತೆಗೆ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಮುಖ್ಯಮಂತ್ರಿಗಳು ಸಹ ಭಾಗವಹಿಸುವರು. ರಾಜ್ಯದಲ್ಲಿ ಇದೇ 19ರಂದು ಅನ್ ಲಾಕ್ 3.O ಅಂತ್ಯಗೊಳ್ಳಲಿದ್ದು, ಮುಂದೇನು ಎನ್ನುವ ಪ್ರಶ್ನೆಗೂ ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ.

ಅನ್ ಲಾಕ್ ನಂತರ ವಿವಿಧ ರಾಜ್ಯಗಳಲ್ಲಿ ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕುರಿತು ಪ್ರಧಾನಿ ಮೋದಿ ಈಗಾಗಲೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮತ್ತೆ ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ಕ್ರಮದ ಕುರಿತು ಸಲಹೆ ನೀಡುವ ಸಾಧ್ಯತೆ ಇದೆ.

ಮಂಗಳವಾರ ಈಶಾನ್ಯದ 8 ರಾಜ್ಯಗಳ ಜೊತೆ ಪ್ರಧಾನಿ ಚರ್ಚೆ ನಡೆಸಿದ್ದು, ಹಲವು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು