8:33 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

13/07/2021, 16:23

ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರು 6 ರಾಜ್ಯಗಳ ಸಿಎಂ ಜತೆ ಸದ್ಯದ ಕೊರೊನಾ ಪರಿಸ್ಥಿತಿ ಮತ್ತು ಮುಂದೆ ಬರಬಹುದಾದ 3ನೇ ಅಲೆ ತಡೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.

ಜುಲೈ 16ರ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪಾಲ್ಗೊಳ್ಳಲಿದ್ದಾರೆ. ಜತೆಗೆ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಮುಖ್ಯಮಂತ್ರಿಗಳು ಸಹ ಭಾಗವಹಿಸುವರು. ರಾಜ್ಯದಲ್ಲಿ ಇದೇ 19ರಂದು ಅನ್ ಲಾಕ್ 3.O ಅಂತ್ಯಗೊಳ್ಳಲಿದ್ದು, ಮುಂದೇನು ಎನ್ನುವ ಪ್ರಶ್ನೆಗೂ ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ.

ಅನ್ ಲಾಕ್ ನಂತರ ವಿವಿಧ ರಾಜ್ಯಗಳಲ್ಲಿ ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕುರಿತು ಪ್ರಧಾನಿ ಮೋದಿ ಈಗಾಗಲೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮತ್ತೆ ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ಕ್ರಮದ ಕುರಿತು ಸಲಹೆ ನೀಡುವ ಸಾಧ್ಯತೆ ಇದೆ.

ಮಂಗಳವಾರ ಈಶಾನ್ಯದ 8 ರಾಜ್ಯಗಳ ಜೊತೆ ಪ್ರಧಾನಿ ಚರ್ಚೆ ನಡೆಸಿದ್ದು, ಹಲವು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು