3:22 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

13/07/2021, 16:23

ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರು 6 ರಾಜ್ಯಗಳ ಸಿಎಂ ಜತೆ ಸದ್ಯದ ಕೊರೊನಾ ಪರಿಸ್ಥಿತಿ ಮತ್ತು ಮುಂದೆ ಬರಬಹುದಾದ 3ನೇ ಅಲೆ ತಡೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.

ಜುಲೈ 16ರ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪಾಲ್ಗೊಳ್ಳಲಿದ್ದಾರೆ. ಜತೆಗೆ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಮುಖ್ಯಮಂತ್ರಿಗಳು ಸಹ ಭಾಗವಹಿಸುವರು. ರಾಜ್ಯದಲ್ಲಿ ಇದೇ 19ರಂದು ಅನ್ ಲಾಕ್ 3.O ಅಂತ್ಯಗೊಳ್ಳಲಿದ್ದು, ಮುಂದೇನು ಎನ್ನುವ ಪ್ರಶ್ನೆಗೂ ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ.

ಅನ್ ಲಾಕ್ ನಂತರ ವಿವಿಧ ರಾಜ್ಯಗಳಲ್ಲಿ ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕುರಿತು ಪ್ರಧಾನಿ ಮೋದಿ ಈಗಾಗಲೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮತ್ತೆ ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ಕ್ರಮದ ಕುರಿತು ಸಲಹೆ ನೀಡುವ ಸಾಧ್ಯತೆ ಇದೆ.

ಮಂಗಳವಾರ ಈಶಾನ್ಯದ 8 ರಾಜ್ಯಗಳ ಜೊತೆ ಪ್ರಧಾನಿ ಚರ್ಚೆ ನಡೆಸಿದ್ದು, ಹಲವು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು