4:50 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು

07/01/2025, 19:38

*ಪತ್ರಿಕೆ ವರದಿ ಮಾಡಿದ್ದ ಬಾಕಿ ಕಾರ್ಡ್ ಪೋಸ್ಟ್ ಮಾಡಿ ಟಾಂಗ್ ಕೊಟ್ಟ ಕೇಂದ್ರ ಸಚಿವರು*

*₹32,000 ಕೋಟಿ ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಎಂದು ಕಿಡಿ*

*ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ, ಗುತ್ತಿಗೆದಾರ ಬಾಕಿ ಪಾವತಿಸಿ ಎಂದ ಸಚಿವರು*

ನವದೆಹಲಿ(reporterkarnataka.com):ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮೀಶನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಸರಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿರುವ ಅವರು, ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.
ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ!! ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ.. ಜಲ ಸಂಪನ್ಮೂಲ: ₹14,600 ಕೋಟಿ, ಲೋಕೋಪಯೋಗಿ: ₹10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ, ಸಣ್ಣ ನೀರಾವರಿ: ₹2,800 ಕೋಟಿ, ಇತರೆ ಇಲಾಖೆ: ₹1,500 ಕೋಟಿ ಸೇರಿ ಒಟ್ಟು: ₹32,000 ಕೋಟಿ ಬಾಕಿ ಇದೆ ಎಂದು ಸಚಿವರು ಹೇಳಿದ್ದಾರೆ.
ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ ಎಂದು ಸಿಎಂ ಮತ್ತು ಸಚಿವರಿಗೆ ಕೇಂದ್ರ ಸಚಿವರು ಕಿವಿಮಾತು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು