5:44 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

60 ಸೀಟಿನ ಸರಕಾರಿ ಬಸ್ಸಿನಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು: ಮತ್ತಷ್ಟು ಮಂದಿಯ ಹತ್ತಿಸುವಂತೆ ಕಂಡೆಕ್ಟರ್ ಜತೆ ಮಹಿಳೆಯರ ವಾಗ್ವಾದ!!

29/08/2023, 15:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬಿ ತುಳುಕುತ್ತಿದ್ದ ಸರಕಾರಿ ಬಸ್ಸಿನಲ್ಲಿ ಮತ್ತಷ್ಟು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಭಾಗದ ಪ್ರವಾಸಿ ಮಹಿಳೆಯರು ಕಂಡೆಕ್ಟರ್ ಜತೆ ಜಗಳವಾಡಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ.
60 ಸೀಟಿನ ಸರ್ಕಾರಿ ಬಸ್ಸಲ್ಲಿ, 150 ಪ್ರಯಾಣಿಕರು ತುಂಬಿದ್ದರು. ಬಸ್ಸಿಗೆ ಇನ್ನು ಜನರನ್ನ ಹತ್ತಿಸುವಂತೆ ಮಹಿಳೆಯರ ದುಂಬಾಲು ಬಿದ್ದರು. ಈ ಸಂದರ್ಭದಲ್ಲಿ ಕಂಟಕ್ಟರ್ ಜೊತೆ ಮಾತಿನ ಸಮರ ಮಹಿಳೆಯರಿಂದ ನಡೆಯಿತು. ಕೊಟ್ಟಿಗೆಹಾರದಿಂದ ಹೊರನಾಡಿಗೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.


ಬಸ್ಸಿನಲ್ಲಿ ನಿಲ್ಲೋಕು ಜಾಗ ಇಲ್ಲ, ಬೇರೆ ಬಸ್ಸಿಗೆ ಹೋಗಿ ಅಂತ ಕಂಡಕ್ಟರ್ ಹೇಳಿದಾಗ ಮಹಿಳೆಯರು ಜಗಳ ಶುರುಮಾಡಿದರು. ಉತ್ತರ ಕರ್ನಾಟಕದಿಂದ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿರುವ ಮಹಿಳೆಯರು ಕಂಡೆಕ್ಟರ್ ಜತೆ ವಾಗ್ವಾದ ನಡೆಸಿದರು. ಪುರುಷ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಪ್ರಯಾಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು