7:51 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

60 ಸೀಟಿನ ಸರಕಾರಿ ಬಸ್ಸಿನಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು: ಮತ್ತಷ್ಟು ಮಂದಿಯ ಹತ್ತಿಸುವಂತೆ ಕಂಡೆಕ್ಟರ್ ಜತೆ ಮಹಿಳೆಯರ ವಾಗ್ವಾದ!!

29/08/2023, 15:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬಿ ತುಳುಕುತ್ತಿದ್ದ ಸರಕಾರಿ ಬಸ್ಸಿನಲ್ಲಿ ಮತ್ತಷ್ಟು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಭಾಗದ ಪ್ರವಾಸಿ ಮಹಿಳೆಯರು ಕಂಡೆಕ್ಟರ್ ಜತೆ ಜಗಳವಾಡಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ.
60 ಸೀಟಿನ ಸರ್ಕಾರಿ ಬಸ್ಸಲ್ಲಿ, 150 ಪ್ರಯಾಣಿಕರು ತುಂಬಿದ್ದರು. ಬಸ್ಸಿಗೆ ಇನ್ನು ಜನರನ್ನ ಹತ್ತಿಸುವಂತೆ ಮಹಿಳೆಯರ ದುಂಬಾಲು ಬಿದ್ದರು. ಈ ಸಂದರ್ಭದಲ್ಲಿ ಕಂಟಕ್ಟರ್ ಜೊತೆ ಮಾತಿನ ಸಮರ ಮಹಿಳೆಯರಿಂದ ನಡೆಯಿತು. ಕೊಟ್ಟಿಗೆಹಾರದಿಂದ ಹೊರನಾಡಿಗೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.


ಬಸ್ಸಿನಲ್ಲಿ ನಿಲ್ಲೋಕು ಜಾಗ ಇಲ್ಲ, ಬೇರೆ ಬಸ್ಸಿಗೆ ಹೋಗಿ ಅಂತ ಕಂಡಕ್ಟರ್ ಹೇಳಿದಾಗ ಮಹಿಳೆಯರು ಜಗಳ ಶುರುಮಾಡಿದರು. ಉತ್ತರ ಕರ್ನಾಟಕದಿಂದ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿರುವ ಮಹಿಳೆಯರು ಕಂಡೆಕ್ಟರ್ ಜತೆ ವಾಗ್ವಾದ ನಡೆಸಿದರು. ಪುರುಷ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಪ್ರಯಾಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು