1:07 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ: ಕೆಎಸ್ಸಾರ್ಟಿಸಿ ಸ್ಪಷ್ಟನೆ

16/05/2022, 17:51

ಬೆಂಗಳೂರು(reporterkarnataka.com):ಮಕ್ಕಳ ‌ಪ್ರಯಾಣ ದರವನ್ನು 6 ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ.

3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟನೆ‌ ನೀಡಿದೆ. 

ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ಕೆಎಸ್ಸಾರ್ಟಿಸಿ ವಿವರಣೆ‌ ನೀಡಿದೆ‌.

ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ,‌ ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೇಟ್ ಪಡೆಯುವಂತೆ  ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ. 

ಈ‌ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ  ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ತಮ್ಮ ಆದ್ಯ ಮಾಹಿತಿಗಾಗಿ ತರಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು