3:30 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ: ಕೆಎಸ್ಸಾರ್ಟಿಸಿ ಸ್ಪಷ್ಟನೆ

16/05/2022, 17:51

ಬೆಂಗಳೂರು(reporterkarnataka.com):ಮಕ್ಕಳ ‌ಪ್ರಯಾಣ ದರವನ್ನು 6 ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ.

3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟನೆ‌ ನೀಡಿದೆ. 

ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ಕೆಎಸ್ಸಾರ್ಟಿಸಿ ವಿವರಣೆ‌ ನೀಡಿದೆ‌.

ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ,‌ ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೇಟ್ ಪಡೆಯುವಂತೆ  ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ. 

ಈ‌ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ  ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ತಮ್ಮ ಆದ್ಯ ಮಾಹಿತಿಗಾಗಿ ತರಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು