10:29 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ: ಕೆಎಸ್ಸಾರ್ಟಿಸಿ ಸ್ಪಷ್ಟನೆ

16/05/2022, 17:51

ಬೆಂಗಳೂರು(reporterkarnataka.com):ಮಕ್ಕಳ ‌ಪ್ರಯಾಣ ದರವನ್ನು 6 ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ.

3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟನೆ‌ ನೀಡಿದೆ. 

ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ಕೆಎಸ್ಸಾರ್ಟಿಸಿ ವಿವರಣೆ‌ ನೀಡಿದೆ‌.

ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ,‌ ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೇಟ್ ಪಡೆಯುವಂತೆ  ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ. 

ಈ‌ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ  ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ತಮ್ಮ ಆದ್ಯ ಮಾಹಿತಿಗಾಗಿ ತರಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು