4:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು