9:23 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು