10:20 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು