10:23 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು