2:45 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

7 ರಾಜ್ಯಗಳ 13 ಕ್ಷೇತ್ರಗಳ ಉಪ ಚುನಾವಣೆ: ಎನ್ ಡಿಎಗೆ ಹೀನಾಯ ಸೋಲು; 10 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು

13/07/2024, 20:39

ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎಗೆ ಭಾರೀ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. 13 ಸ್ಥಾನಗಳ ಪೈಕಿ 10 ಸ್ಥಾನ ಗಳನ್ನು ಇಂಡಿಯಾ ಮೈತ್ರಿಕೂಟ ಗೆದ್ದಿದೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ ಡಿಎ ಮೈತ್ರಿಕೂಟ ಕೇವಲ 2 ಸ್ಥಾನ ಗಳನ್ನು ಮಾತ್ರ ಪಡೆದುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿದ್ದಾರೆ.
ಬಿಹಾರದಲ್ಲಿ ಸ್ವತಂತ್ರ ಅಭ್ಯರ್ಥಿ ರುಪೌಲಿ ಗೆದ್ದಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಐಎನ್‌ಸಿ ಡೆಹ್ರಾ ಮತ್ತು ನಲಗಢವನ್ನು ಗೆದ್ದರೆ, ಬಿಜೆಪಿ ಹಮೀರ್‌ಪುರದಲ್ಲಿ ಜಯಗಳಿಸಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಮರವಾರ ಗೆದ್ದಿದೆ. ಪಂಜಾಬ್‌ನಲ್ಲಿ ಎಎಪಿ ಜಲಂಧರ್ ಪಶ್ಚಿಮದಲ್ಲಿ ಗೆದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆ ವಿಕ್ರವಾಂಡಿಯಲ್ಲಿ ಗೆದ್ದಿದೆ. ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷವು ಬದರಿನಾಥ್ ಮತ್ತು ಮಂಗಳೌರ್ ಅನ್ನು ಗೆದ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ರಾಯಗಂಜ್, ರಣಘಾಟ್ ದಕ್ಷಿಣ್, ಬಾಗ್ದಾ ಮತ್ತು ಮಾಣಿಕ್ತಾಲಾವನ್ನು ಗೆದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು