ಇತ್ತೀಚಿನ ಸುದ್ದಿ
7ನೇ ವೇತನ ಆಯೋಗ ಜಾರಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಮನವಿ
13/07/2024, 14:19

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಸರ್ಕಾರವು 7ನೇ ವೇತನ ಆಯೋಗ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು,ಈಗಾಗಲೇ ಸರಕಾರ ನೀಡಿರುವ ಶೇ. 17% ಮಧ್ಯಂತರ ಪರಿಹಾರದೊಂದಿಗೆ ಆಯೋಗ ನೀಡಿದ ವರದಿಯನ್ನು ಜಾರಿಗೊಳಿಸುವುದು ಹಾಗೂ ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಹಾಗೂ ಸರಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರಿಗೆ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲು ತಾವು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೆ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಶಾಸಕರಿಗೂ ಮನವಿಯ ಪ್ರತಿಯನ್ನು ಸಲ್ಲಿಸಿ,ಮುಂದಿನ ಅಧಿವೇಶನದಲ್ಲಿ ಈ ವಿಷಯಗಳ ಬಗ್ಗೆ ಧ್ವನಿ ಎತ್ತಲು ಮಾನ್ಯ ಶಾಸಕರಿಗೆ ಮನವಿ ಮಾಡಿದರು.ನಿಯೋಗದಲ್ಲಿ ಜಿಲ್ಲಾ ಕಾರ್ಯದರ್ಶಿ ಲಿಲ್ಲಿ ಪಾಯ್ಸ್,ಉದಯ ಕುಮಾರ್, ಗೌರವಾಧ್ಯಕ್ಷರು
ಸುಧೀರ್ ಉಚ್ಚಿಲ್, ಹಿರಿಯ ಉಪಾಧ್ಯಕ್ಷರು ಹರೀಶ್ ಕುಮಾರ್, ಹಿರಿಯ ಉಪಾಧ್ಯಕ್ಷರು ವಾಣಿ, ಉಪಾಧ್ಯಕ್ಷರು,ನಿಸಾರ್ ಅಹ್ಮದ್, ರಾಜ್ಯ ರಾಜ್ಯ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.