9:09 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನವಮಂಗಳೂರು ಬಂದರಿಗೆ 7ನೇ ವಿಹಾರ ಹಡಗು ಆಗಮನ: ಪ್ರವಾಸಿಗರಿಗೆ ಕರಾವಳಿಯ ಸಾಂಪ್ರದಾಯಿಕ ಸ್ವಾಗತ

10/05/2025, 02:00

ಮಂಗಳೂರು(reporterkarnataka.com): ನವ ಮಂಗಳೂರು ಬಂದರಿಗೆ ಸೆವೆನ್ ಸೀಸ್ ವಾಯೇಜರ್ ಕ್ರೂಸ್ ಶುಕ್ರವಾರ ಆಗಮಿಸಿತು.


ಪ್ರಸ್ತುತ ಕ್ರೂಸ್ ಋತುವಿನ ಏಳನೇ ವಿಹಾರ ನೌಕೆ ಇದಾಗಿದೆ. M.S. ಸೆವೆನ್ ಸೀಸ್ ವಾಯೇಜರ್ ಬರ್ತ್ ನಂ. 4 ರಲ್ಲಿ ಬೆಳಗ್ಗೆ 8:30 ಗಂಟೆಗೆ ಆಗಮಿಸಿತು. ಕೊಲಂಬೊ-ಕೊಚ್ಚಿನ್-ಮಂಗಳೂರು-ಮೊರ್ಮುಗೋವ್-ಮುಂಬಯಿ-ದುಬೈ ಸಂಪರ್ಕಿಸುವ ಕರಾವಳಿ ಮಾರ್ಗದ ಭಾಗವಾಗಿ ಬಹಮಿಯನ್ ಧ್ವಜದ ಅಡಿಯಲ್ಲಿ 583 ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು 458 ಸಿಬ್ಬಂದಿಯನ್ನು ಹೊತ್ತ ಹಡಗು ಕೊಲಂಬೊದಿಂದ ಆಗಮಿಸಿತು.
ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.
ಅತಿಥಿಗಳನ್ನು ಚೆಂಡೆ ಮದ್ದಳೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಬರ ಮಾಡಿಕೊಳ್ಳಲಾಯಿತು. ಕ್ರೂಸ್ ಪ್ರಯಾಣಿಕರ ಸುಗಮ ವಲಸೆ, ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಆತಿಥ್ಯ ಸೇವೆಗಳಿಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಪ್ರಯಾಣಿಕರು ತಮ್ಮ ಮನರಂಜನೆಗಾಗಿ ಏರ್ಪಡಿಸಿದ್ದ ಭರತನಾಟ್ಯ ಪ್ರದರ್ಶನಗಳನ್ನು ವೀಕ್ಷಿಸುವ ಮೂಲಕ ಸ್ಥಳೀಯ ಸಂಸ್ಕೃತಿಯನ್ನು ಅನುಭವಿಸಿದರು. ಕಾರ್ಕಳ, ಮೂಡಬಿದ್ರಿಯ ಸಾವಿರ ಕಂಬದ ಬಸದಿ, ಗೋಕರ್ಣನಾಥ ದೇವಸ್ಥಾನ, ಸೋನ್ಸ್ ಫಾರ್ಮ್, ಪಿಲಿಕುಳ, ಮತ್ತು ಎಸ್‌ಎಸಿ ಚಾಪೆಲ್ ಸೇರಿದಂತೆ ಐಕಾನಿಕ್ ತಾಣಗಳಿಗೆ ಮಾರ್ಗದರ್ಶಿ ತೀರ ವಿಹಾರಗಳನ್ನು ಆಯೋಜಿಸಲಾಗಿದೆ. ಸ್ಥಳೀಯ ಮಾರುಕಟ್ಟೆಗಳು ಮತ್ತು ಬೆಲ್ಮಾಂಟ್ ಹೋಮ್‌ಗೆ ಭೇಟಿ ನೀಡಿದಾಗ ಸಾಂಪ್ರದಾಯಿಕ ಮಂಗಳೂರಿನ ಜೀವನದ ಒಂದು ನೋಟವನ್ನು ನೀಡಿತು.
ಹಡಗು ದಿನ ಸಂಜೆ ಗೋವಾದ ಮೊರ್ಮುಗೋ ಬಂದರಿಗೆ ಹೊರಟಿತು.

ಇತ್ತೀಚಿನ ಸುದ್ದಿ

ಜಾಹೀರಾತು