10:42 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು!

24/11/2021, 17:01

ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರೆಸ್ ನ ಮಹಿಳಾ ನಾಯಕಿಯರು ಈ ಕುರಿತು ತುಟಿ ಬಿಚ್ಚದೆ ಮೌನವಹಿಸಿದ್ದಾರೆ.

ಝರ್ಖಾಂಡ್ ನಿಂದ ಕೂಲಿ ಕೆಲಸಕ್ಕೆ ಬಂದ ನಾಲ್ವರು ಆರೋಪಿಗಳು ಬಾಲಕಿಯ ಮೇಲೆ ಮೃಗೀಯಾಗಿ ಅತ್ಯಾಚಾರ ನಡೆಸಿ, ಬಳಿಕ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು

ಜೈಬಾನ್ ಅಲಿಯಾಸ್ ಜೈ ಸಿಂಗ್, ಮುಕೇಶ್ ಸಿಂಗ್, ಮನೀಶ್ ಟಿರ್ಕಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ.

8ರ ಹರೆಯದ ಬಾಲಕಿಗೆ ಚಾಕಲೇಟ್ ಹಾಗೂ ಸಿಹಿ ತಿಂಡಿಯ ಆಸೆ ತೋರಿಸಿ ಬಂಧಿತ ಆರೋಪಿಗಳಲ್ಲಿ ಇಬ್ಬರು ಈ ಹಿಂದೆ 3-4 ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈ ಇಬ್ಬರು ಕಾಮುಕರ ಜತೆ ಭಾನುವಾರ ದಿನ ಮತ್ತಿಬ್ಬರು ಜತೆ ಸೇರಿ ಅತ್ಯಾಚಾರ ಮಾಡಿದ್ದಾರೆ. 

ಬಾಲಕಿಗೆ ಸಿಕ್ಕಾಪಟ್ಟೆ ರಕ್ತಸ್ರಾವವಾದಾಗ ಸಿಕ್ಕಿಬೀಳಬಹುದು‌ ಎಂಬ ಭಯದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು