9:41 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು!

24/11/2021, 17:01

ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರೆಸ್ ನ ಮಹಿಳಾ ನಾಯಕಿಯರು ಈ ಕುರಿತು ತುಟಿ ಬಿಚ್ಚದೆ ಮೌನವಹಿಸಿದ್ದಾರೆ.

ಝರ್ಖಾಂಡ್ ನಿಂದ ಕೂಲಿ ಕೆಲಸಕ್ಕೆ ಬಂದ ನಾಲ್ವರು ಆರೋಪಿಗಳು ಬಾಲಕಿಯ ಮೇಲೆ ಮೃಗೀಯಾಗಿ ಅತ್ಯಾಚಾರ ನಡೆಸಿ, ಬಳಿಕ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು

ಜೈಬಾನ್ ಅಲಿಯಾಸ್ ಜೈ ಸಿಂಗ್, ಮುಕೇಶ್ ಸಿಂಗ್, ಮನೀಶ್ ಟಿರ್ಕಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ.

8ರ ಹರೆಯದ ಬಾಲಕಿಗೆ ಚಾಕಲೇಟ್ ಹಾಗೂ ಸಿಹಿ ತಿಂಡಿಯ ಆಸೆ ತೋರಿಸಿ ಬಂಧಿತ ಆರೋಪಿಗಳಲ್ಲಿ ಇಬ್ಬರು ಈ ಹಿಂದೆ 3-4 ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈ ಇಬ್ಬರು ಕಾಮುಕರ ಜತೆ ಭಾನುವಾರ ದಿನ ಮತ್ತಿಬ್ಬರು ಜತೆ ಸೇರಿ ಅತ್ಯಾಚಾರ ಮಾಡಿದ್ದಾರೆ. 

ಬಾಲಕಿಗೆ ಸಿಕ್ಕಾಪಟ್ಟೆ ರಕ್ತಸ್ರಾವವಾದಾಗ ಸಿಕ್ಕಿಬೀಳಬಹುದು‌ ಎಂಬ ಭಯದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು