6:45 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು