6:52 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು