12:05 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು