8:23 AM Monday5 - January 2026
ಬ್ರೇಕಿಂಗ್ ನ್ಯೂಸ್
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ…

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು