12:34 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು