9:04 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು