7:16 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು