1:46 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು