6:24 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು