12:25 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಅಥಣಿಯಲ್ಲಿ ಕನ್ನಡಾಂಬೆಯ ಜ್ಯೋತಿ ರಥಯಾತ್ರೆ ಅದ್ದೂರಿ ಮೆರವಣಿಗೆ

06/10/2024, 22:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಕನ್ನಡ ನಾಡು-ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯದ ಮಹತ್ವವನ್ನು ಸಾರುವ ಈ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಹಾರೈಸೋಣ ಎಂದು ಅಥಣಿ ಪುರಸಭೆ ಅಧ್ಯಕ್ಷ ಶಿವಲೀಲಾ ಸದಾಶಿವ ಬುಟಾಳಿ ಹೇಳಿದರು.


ಅವರು ಅಥಣಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡಾಂಬೆಯ ಜ್ಯೋತಿ ರಥಕ್ಕೆ ಪೂಜಿ ಸಲ್ಲಿಸಿ ಮಾತನಾಡಿದರು.
ಸ್ವಾಗತ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ತಾಲೂಕಾ ತಹಶೀಲ್ದಾರ ಶಿದರಾಯ ಬೋಸಗೆ ಅವರು ಸಮ್ಮೇಳನದ ರಥದಲ್ಲಿನ ಕನ್ನಡದ ತಾಯಿ ಶ್ರೀ ಭುವನೇಶ್ವರಿ ಮೂರ್ತಿಗೆ ಪೂಜೆಯ ಸಲ್ಲಿಸಿ ವಿವಿಧ ಕಲಾತಂಡಗಳ ಮೆರವಣಿಗೆಯ ಮೂಲಕ ರಾಯಬಾಗ್ ತಾಲೂಕಿಗೆ ಬೀಳ್ಕೊಡುವ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬರುವ ಡಿಸೆಂಬರ್ 20, 21 ಮತ್ತು 22 ರಂದು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಹಮ್ಮಿಕೊಂಡಿದೆ. ಈ ಸಮ್ಮೇಳನದ ಮಹತ್ವ ಸಾರುವ ಉದ್ದೇಶದಿಂದ ರಾಜ್ಯದ್ಯಂತ ಈ ಕನ್ನಡಾಂಬೆಯ ಜ್ಯೋತಿ ರಥ ಯಾತ್ರೆ ಸಂಚರಿಸುತ್ತಿದೆ. ತಾಲೂಕ ಆಡಳಿತದಿಂದ ಈ ರಥಯಾತ್ರೆಯನ್ನು ಕನ್ನಡ ಅಭಿಮಾನ ಹಾಗೂ ಗೌರವದಿಂದ ಬರಮಾಡಿಕೊಂಡು ಇಂದು ಭಾನುವಾರ ಮುಂಜಾನೆ ಕ್ರಾಂತಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಭವ್ಯ ಮೆರವಣಿಗೆಯ ಮೂಲಕ ರಾಯಬಾಗ ತಾಲೂಕಿಗೆ ಬಿಳ್ಕೊಡು ಕಾರ್ಯಕ್ರಮದಲ್ಲಿ
ಸ್ವಾಭಿಮಾನದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲಾ ಕನ್ನಡ ಅಭಿಮಾನಿಗಳಿಗೆ, ಸಾಹಿತಿಗಳಿಗೆ, ಕನ್ನಡಪರ ಸಂಘಟನೆಯ ಪದಾಧಿಕಾರಿಗಳಿಗೆ, ಕಲಾವಿದರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿಯವರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸದಾಶಿವ ಬುಟಾಳಿ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ತಾಲೂಕ ಆರೋಗ್ಯ ಅಧಿಕಾರಿ ಡಾ. ಬಸಗೌಡ ಕಾಗೆ, ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ, ಕ್ಷೇತ್ರದ ಶಿಕ್ಷಣ ಅಧಿಕಾರಿ ಎಂ ಬಿ ಮೋರಟಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರೇಣುಕಾ ಹೊಸಮನಿ, ಎಸಿಡಿಪಿಓ ಮಂಜುನಾಥ, ಬಿಸಿಎಂ ಇಲಾಖೆ ಅಧಿಕಾರಿ ವೆಂಕಟೇಶ ಕುಲಕರ್ಣಿ, ಸಾಹಿತಿ ದೇವೆಂದ್ರ ಬಿಸ್ವಾಗರ, ಕನ್ನಡಪರ ಹೋರಾಟಗಾರ ಅಣ್ಣಾಸಾಬ ತೆಲಸಂಗ. ಉದಯ ಮಾಕಾಣಿ , ರಾಜು ವಾಘಮಾರೆ, ಶಬ್ಬೀರ ಸಾತಬಚ್ಚಿ, ಗ್ರಾಮ ಆಡಳಿತ ಅಧಿಕಾರಿಗಳಾದ ಎಂ ಎಂ ಮಲ್ಲುಕಾನ, ಎಂ ಎಂ ಮಿರ್ಜಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಅಧಿಕಾರಿಗಳು ಮತ್ತು ಅವರ ಸಿಬ್ಬಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು