8:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ ವಿಶೇಷ ಪೂಜೆ

22/11/2025, 19:18

ತುಮಕೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನವಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲೆಂದು ಪಾವಗಡದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ಹಾರೈಸಿದ್ದಾರೆ.


ತಾಲೂಕಿನ ಡಿಕೆ ಅಭಿಮಾನಿ ಬಳಗದ ವತಿಯಿಂದ ಪಾವಗಡದ ಪ್ರಸಿದ್ಧ ಶನಿ ಮಹಾತ್ಮ ದೇವಾಲಯದಲ್ಲಿ 91 ಕೆಜಿ ಎಳ್ಳಿನ ತುಲಾಭಾರ ಮಾಡುವ ಮೂಲಕ ದೇವರಿಗೆ ಸಮರ್ಪಣೆ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಇರುವ ಕುಜದೋಷ ಮತ್ತು ಶನಿ ದೋಷಗಳು ದೂರವಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ಹಾದಿ ಸುಗಮವಾಗಲೆಂದು ತುಲಾಭಾರ ನಡೆಸಲಾಗಿದೆ.
ಇದೇ ವೇಳೆ ದೇವಾಲಯದ ನವಗ್ರಹಗಳಿಗೆ ವಿಶೇಷ ತೈಲಾಭಿಷೇಕವನ್ನು ಸಹ ನೆರವೇರಿಸಿ,ಶಿವಕುಮಾರ್ ಅವರ ರಾಜಕೀಯ ಜೀವನಕ್ಕೆ ಪ್ರಾರ್ಥಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಹನುಮಂತರಾಯಪ್ಪ, ಡಿಕೆಶಿ ಅಭಿಮಾನಿ ಬಳಗ ಅಧ್ಯಕ್ಷ ಕಳರಾಜನಹಳ್ಳಿ ಗೋವಿಂದರಾಜು, ಅರಸೀಕೆರೆ ನಿವೃತ್ತ ಶಿಕ್ಷಕ ಚಿಕ್ಕಣ್ಣ, ಉಮಾಪತಿ, ಹರೀಶ್ ಸೇರಿದಂತೆ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು