9:43 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ ವಿಶೇಷ ಪೂಜೆ

22/11/2025, 19:18

ತುಮಕೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನವಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲೆಂದು ಪಾವಗಡದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ಹಾರೈಸಿದ್ದಾರೆ.


ತಾಲೂಕಿನ ಡಿಕೆ ಅಭಿಮಾನಿ ಬಳಗದ ವತಿಯಿಂದ ಪಾವಗಡದ ಪ್ರಸಿದ್ಧ ಶನಿ ಮಹಾತ್ಮ ದೇವಾಲಯದಲ್ಲಿ 91 ಕೆಜಿ ಎಳ್ಳಿನ ತುಲಾಭಾರ ಮಾಡುವ ಮೂಲಕ ದೇವರಿಗೆ ಸಮರ್ಪಣೆ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಇರುವ ಕುಜದೋಷ ಮತ್ತು ಶನಿ ದೋಷಗಳು ದೂರವಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ಹಾದಿ ಸುಗಮವಾಗಲೆಂದು ತುಲಾಭಾರ ನಡೆಸಲಾಗಿದೆ.
ಇದೇ ವೇಳೆ ದೇವಾಲಯದ ನವಗ್ರಹಗಳಿಗೆ ವಿಶೇಷ ತೈಲಾಭಿಷೇಕವನ್ನು ಸಹ ನೆರವೇರಿಸಿ,ಶಿವಕುಮಾರ್ ಅವರ ರಾಜಕೀಯ ಜೀವನಕ್ಕೆ ಪ್ರಾರ್ಥಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಹನುಮಂತರಾಯಪ್ಪ, ಡಿಕೆಶಿ ಅಭಿಮಾನಿ ಬಳಗ ಅಧ್ಯಕ್ಷ ಕಳರಾಜನಹಳ್ಳಿ ಗೋವಿಂದರಾಜು, ಅರಸೀಕೆರೆ ನಿವೃತ್ತ ಶಿಕ್ಷಕ ಚಿಕ್ಕಣ್ಣ, ಉಮಾಪತಿ, ಹರೀಶ್ ಸೇರಿದಂತೆ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು