8:12 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು

23/05/2021, 16:07

ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಗದಗ ಸಮೀಪದ ಗ್ರಾಮವೊಂದರ ಸುಮಾರು 45ರ ಹರೆಯದ ಮಹಿಳೆಯೊಬ್ಬರು ತನಗೆ ಕೊರೊನಾ ಬರಬಹುದು ಎಂಬ ಭಯದಿಂದಲೇ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಕೊರೊನಾ ಪರೀಕ್ಷೆ ನಡೆಸುವಂತೆ ಪರಿಚಯಸ್ಥರು ಆಕೆಗೆ ಸಲಹೆ ನೀಡಿದ್ದರು. ಆದರೆ ಭಯಭೀತರಾದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ಲಿಂಗೇಗೌಡ (68) ಎಂಬವರು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

ಕೆಪಿಸಿ ನಿವೃತ್ತ ಉದ್ಯೋಗಿಯಾಗಿರುವ ಲಿಂಗೇಗೌಡ ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು