9:35 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು

23/05/2021, 16:07

ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಗದಗ ಸಮೀಪದ ಗ್ರಾಮವೊಂದರ ಸುಮಾರು 45ರ ಹರೆಯದ ಮಹಿಳೆಯೊಬ್ಬರು ತನಗೆ ಕೊರೊನಾ ಬರಬಹುದು ಎಂಬ ಭಯದಿಂದಲೇ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಕೊರೊನಾ ಪರೀಕ್ಷೆ ನಡೆಸುವಂತೆ ಪರಿಚಯಸ್ಥರು ಆಕೆಗೆ ಸಲಹೆ ನೀಡಿದ್ದರು. ಆದರೆ ಭಯಭೀತರಾದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ಲಿಂಗೇಗೌಡ (68) ಎಂಬವರು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

ಕೆಪಿಸಿ ನಿವೃತ್ತ ಉದ್ಯೋಗಿಯಾಗಿರುವ ಲಿಂಗೇಗೌಡ ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು