9:06 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಮನಪಾ ಹೊರಗುತ್ತಿಗೆ ನೌಕರರ ಖಾಯಂಮಾತಿಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

19/12/2025, 18:18

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇರ ಪಾವತಿ ಅಥವಾ ಖಾಯಂಗೊಳಿಸಬೇಕು ಎಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಸರ್ಕಾರವನ್ನು ಆಗ್ರಹಿಸಿದರು.

ಈ ವರ್ಗದ ಎಲ್ಲಾ ಕಾರ್ಮಿಕರು ಬಹಳ ಕಷ್ಟಪಟ್ಟು ದುಡಿಯುವವರು. ಪರಿಶಿಷ್ಟ ಸಮುದಾಯಕ್ಕೆ ಸೇರಿದ ಬಂಧುಗಳು ಸಹ ಇದರಲ್ಲಿ ಹೆಚ್ಚಾಗಿದ್ದು ನಗರದ ಸ್ವಚ್ಛತೆಯ ಹಿಂದೆ ಅವರ ಅಪಾರ ಶ್ರಮವಿದೆ. ಒಂದು ದಿನ ಅವರೆಲ್ಲರೂ ಕರ್ತವ್ಯಕ್ಕೆ ಗೈರಾದರೆ ನಗರದ ಸ್ವಚ್ಛತೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುತ್ತದೆ. ಇವರಿಗೆ ಯಾವುದೇ ಪಿಂಚಣಿ ಇಲ್ಲ. ಹೀಗಾಗಿ ಭವಿಷ್ಯದಲ್ಲಿ ಇವರು ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಾಗೆಲ್ಲಾ ಆ ಪ್ರಸ್ತಾವನೆ ನಮ್ಮ ಮುಂದೆ ಎಂದು ಹೇಳುತ್ತಾ ಇದೀಗ ಎರಡೂವರೆ ಎರಡು ವರ್ಷಗಳಿದಿವೆ ಹೊರತು ಯಾವುದೇ ಕ್ರಮಕೈಗೊಂಡಿಲ್ಲ. ಮ.ನ.ಪಾದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಗವಾನ್ ದಾಸ್ ಮತ್ತು ಇತರರು ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಸದನದ ಗಮನ ಸೆಳೆದರು.

ಈ ಕಾರ್ಮಿಕರು ಮಂಗಳೂರಿನಲ್ಲಿ ಎರಡೆರಡು ಬಾರಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ನಾವು ಅವರ ನ್ಯಾಯಯುತ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಹಾಗೂ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇವೆ. ಸರ್ಕಾರ ಇನ್ನೂ ಸಹ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ನಾವೂ ಸಹ ಅವರೊಂದಿಗೆ ಪ್ರತಿಭಟನೆಯಲ್ಲಿ ಸೇರಿ ಕೊಳ್ಳಬೇಕಾಗುತ್ತದೆ. ಕಸ ಸಾಗಿಸುವ ವಾಹನಗಳಿಗೆ ವಿಮೆಯನ್ನೂ ಸಹ ನವೀಕರಣಗೊಳಿಸದೇ ಬೇಜವಾಬ್ದಾರಿ ತೋರಲಾಗಿದ್ದು ಒಂದು ವೇಳೆ ಯಾವುದೇ ದುರ್ಘಟನೆ ಸಂಭವಿಸಿ ಕಾರ್ಮಿಕರಿಗೆ ತೊಂದರೆಯಾದರೆ ಯಾರು ಹೊಣೆ? ಸರ್ಕಾರದ ಬಳಿ ವಾಹನ ವಿಮೆಗೂ ದುಡ್ಡಿಲ್ಲವೇ ಎಂದು ಶಾಸಕರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು