6:41 AM Friday9 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ

04/09/2021, 19:18

ಮಂಗಳೂರು(reporterkarnataka.com): 

ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾಗಿಲ್ಲ. ಈ ನಿಟ್ಟಿನಲ್ಲಿ ನಮ್ಮನ್ನಾಳುವವರನ್ನು ಬಡಿದೆಬ್ಬಿಸಲು ಮತ್ತೆ ತುಳುವಿಗಾಗಿ ಟ್ವೀಟ್ ಅಭಿಯಾನ ನಡೆಯಲಿದೆ. ಸೆಪ್ಟೆಂಬರ್ 5 ರಂದು ಟ್ವೀಟ್ ಅಭಿಯಾನ ಸಾಕಾರಗೊಳ್ಳಲಿದೆ.

ತುಳುವರ ಸ್ವಾಭಿಮಾನದ ದೃಷ್ಟಿಯಿಂದ ಸೆ.5ರಂದು 

ನಡೆಯುವ#TuluOfficialinKA_KL ಟ್ವೀಟ್ ಅಭಿಯಾನವು ಬಹಳಷ್ಟು ಮಹತ್ವ ಪಡೆದಿದೆ. ಈ ಹಿಂದೆ ಜೂನ್ 14ರಂದು ನಡೆದ

ಟ್ವೀಟ್ ಅಭಿಯಾನದಲ್ಲಿ 4 ಲಕ್ಷ ಮಂದಿ ಪಾಲ್ಗೊಂಡು ರಾಷ್ಟ ಮಟ್ಟದಲ್ಲಿ ಹೊಸ ದಾಖಲೆಯ ಬರೆದಿದ್ದರು. ಇಷ್ಟೇ ಅಲ್ಲದೆ ಇದು ದೇಶವ್ಯಾಪ್ತಿಯಲ್ಲಿ ಚರ್ಚೆಗೆ ಗ್ರಾಸವಾಯಿತು. ರಾಜಕೀಯ ವಲಯದಲ್ಲಿಯೂ ಬಿರುಗಾಳಿ ಎನ್ನಿಸಿತು.

ತುಳುವಿಗೆ 60 ವರ್ಷಗಳ ಕಾಲ ಯಾವುದೇ ಸ್ಥಾನಮಾನ ಕೊಡದೇ ಇರುವ ವಿರುದ್ಧ ಜನಾಕ್ರೋಶ ಟ್ವೀಟ್ ಮೂಲಕ ಹೊರಹೊಮ್ಮಿತ್ತು. ವಿಶೇಷವೆಂದರೆ ಬಹಳಷ್ಟು ರಾಜಕೀಯ ಪಕ್ಷಗಳ ನಾಯಕರು ಅಭಿಯಾನದಲ್ಲಿ ಕೈಜೋಡಿಸಿ ತುಳುವಿಗಾಗಿ ಕೈ ಎತ್ತಿದ್ದರು. ಆದರೆ ಅಷ್ಟಕ್ಕೆ ತುಳುವರ ಬೇಡಿಕೆ ಈಡೇರುವುದಿಲ್ಲ.

ಕಾಸರಗೋಡಿನ ನೀಲೇಶ್ವರದಿಂದ ಆರಂಭವಾಗಿ ಬಾರಕೂರು ವರೆಗೆ ಹಬ್ಬಿರುವ ಈ ವಿಶಾಲವಾದ ತುಳುನಾಡಿನಲ್ಲಿ ತುಳುವರಿಗೆ ಇದೊಂದು ಬರೇ ಭಾಷೆಯಲ್ಲ. ಬದಲಿಗೆ ಇದೊಂದು ಜೀವನ ವಿಧಾನ, ಸಂಸ್ಕೃತಿ ಆಗಿದೆ. ತುಳುವಿನಲ್ಲಿ ಸಾಕಷ್ಟು ಸಾಹಿತ್ಯ ರಚನೆಯಾಗಿದೆ. ಕವಿತೆ, ಕಥೆ, ಮಹಾಕಾವ್ಯ, ಕಾದಂಬರಿ, ನಾಟಕ, ರೂಪಕ, ಯಕ್ಷಗಾನ ರಚನೆಯಾಗಿದೆ. ತುಳು ಸಿನಿಮಾಗಳು ಬಂದಿವೆ. ತುಳುವಿನ ವಾಲ್ಮೀಕಿ ಎಂದೇ ಪ್ರಸಿದ್ಧರಾದ ಮಂದಾರ ಕೇಶವ ಭಟ್ ಅವರು ತುಳುವಿನಲ್ಲಿ ಮಹಾಕಾವ್ಯವನ್ನೇ ಸೃಷ್ಟಿಸಿದ್ದಾರೆ. ಮಂದಾರ ರಾಮಾಯಣ ಬರೆದಿದ್ದಾರೆ. ಇದರ ಜತೆಗೆ ತುಳು ಭಾಷೆಗಾಗಿ ಕೇಶವ ಭಟ್ ಅವರು ಸಾಕಷ್ಟು ಸಾಹಿತ್ಯ ಕೃಷಿ ಮಾಡಿದ್ದಾರೆ. ತುಳು ಭಾಷೆಯ ನಡೆದಾಡುವ ವಿಶ್ವವಿದ್ಯಾನಿಲಯವೇ ಅವರಾಗಿದ್ದರು. ಆದರೆ ಅವರು ಹುಟ್ಟಿದ ಮನೆ ಮಂಗಳೂರಿನ ಪಚ್ಚನಾಡಿ ಸಮೀಪದ ಮಂದಾರದಲ್ಲಿ ತ್ಯಾಜ್ಯ ಸುನಾಮಿಗೆ ಸಿಲುಕಿ ಶಿಥಿಲಗೊಂಡಿದೆ. ಅದನ್ನು ಉಳಿಸುವ ಪ್ರಯತ್ನ ನಡೆಯಬೇಕಾಗಿದೆ.ಅವರು ಬದುಕಿರುತ್ತಿದ್ದರೆ ಈ ಕಾಲಘಟ್ಟದಲ್ಲಿ ತುಳುಭಾಷೆಯ ಉಳಿವಿನ ಹೋರಾಟದಲ್ಲಿ ಮುಂಚೋಣಿಯಲ್ಲಿರುತ್ತಿದ್ದರು ಎಂದು ಅವರನ್ನು ಹತ್ತಿರದಿಂದ ಬಲ್ಲವರು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇದೀಗ ಸೆ.  5ರಂದು ಟ್ವೀಟ್ ಅಭಿಯಾನ ನಡೆಯಲಿದೆ. ಸೆಪ್ಟೆಂಬರ್ 13 ರಿಂದ ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಇದರಿಂದ ಸೆ. 5ರ ಟ್ವೀಟ್ ಅಭಿಯಾನ ಬಹಳಷ್ಟು ಮಹತ್ವ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು