3:01 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? 

04/09/2021, 21:49

ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. 
ಅವರು ಶನಿವಾರ ಕೋವಿಡ್-19 ಸೋಂಕಿನ ನಿಯಂತ್ರಣ ಕುರಿತು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೋ ಸಂವಾದ ನಡೆಸಿ ಸೂಚನೆ ನೀಡಿದರು. 
ಜಿಲ್ಲೆಯ ಗಡಿ ಭಾಗಗಳು, ನಗರ ಪ್ರದೇಶಗಳಲ್ಲಿ ಹೆಚ್ಚಿನ ಕೋವಿಡ್ ತಪಾಸಣೆ ಮಾಡಬೇಕು, ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆಗಳನ್ನು ನೀಡಬೇಕು, ಇದರಿಂದ ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು. ಕೊರೊನಾ ಸೂಚ್ಯಂಕವನ್ನು ಇಳಿಕೆ ಮಾಡುವಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು, ವಾರಾಂತ್ಯ ಮತ್ತು ರಾತ್ರಿ ಕಫ್ರ್ಯೂಗಳು ಜಾರಿಯಲ್ಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೂ ಸಾರ್ವಜನಿಕರು ಕಡ್ಡಾಯವಾಗಿ ಈ ನಿರ್ದೇಶನಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಅವರು ತಿಳಿಸಿದರು.
ಆಯಾ ದಿನಗಳಂದು ಹಂಚಿಕೆಯಾಗುವ ಲಸಿಕೆಗಳನ್ನು ಅದೇ ದಿನವೇ ನೀಡಬೇಕು,  ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕಂದಾಯ, ರೈಲ್ವೇ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳು ಹೆಚ್ಚಿನ ಗಮನಹರಿಸಿ ಸಹಕರಿಸಬೇಕು. ಜಿಲ್ಲಾಡಳಿತ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಚಾಚುತಪ್ಪದೇ ಪಾಲಿಸಬೇಕು. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆಯೂ ಅವರು ತಿಳಿಸಿದರು. 
ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 2,240 ಕೋವಿಡ್ ಸಕ್ರೀಯ ಪ್ರಕರಣಗಳಿದ್ದೂ, ಶೇ.70 ರಷ್ಟು ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ ಹಾಗೂ ಶೇ. 30 ರಷ್ಟು ಆಸ್ಪತೆ ಸೇರಿದಂತೆ ವಿವಿಧ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ, ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳು ಕೋವಿಡ್ ನಿಯಂತ್ರಣ ಮಾಡುವಲ್ಲಿ ಮುಂಚೂಣಿಯಲ್ಲಿದ್ದು, ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದವರು ಮಾಹಿತಿ ನೀಡಿದರು. 
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಉಪವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಕಿಶೋರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ವಿಸಿಯಲ್ಲಿ ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು