11:08 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ದ್ವೇಷ ಭಾಷಣ ವಿಧೇಯಕ ಸಹಕಾರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

20/12/2025, 20:47

ಮಂಗಳೂರು(reporterkarnataka.com): ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಮಂಡನೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ಮತ್ತು ರಾಜಕೀಯ ವಿಚಾರಗಳಲ್ಲಿ ಸಂಘರ್ಷ ಸೃಷ್ಟಿಸುವ ಮಾತುಗಳು ಹೆಚ್ಚಾಗುತ್ತಿವೆ. ಭಾಷಣ ಕೇಳಿ ಕೊಲೆ ಯತ್ನ ಮಾಡಿದ್ದಾರೆ. ಯುವಕರನ್ನು ಪ್ರಚೋದಿಸುವ ಕಾರ್ಯ ಹೆಚ್ಚಾಗುವ ಈ ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯ ಕಾಪಾಡುವುದು ಮತ್ತು ದ್ವೇಷ ಭಾಷಣದಿಂದ ಉಂಟಾಗುವ ಸಂಘರ್ಷಗಳನ್ನು ತಡೆಗಟ್ಟಲು ಈ ವಿಧೇಯಕ ತುಂಬಾ ಸಹಕಾರಿಯಾಗಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸಾರ ಅಥವಾ ಪ್ರಚಾರ ಹಾಗೂ ಅಪರಾಧಗಳನ್ನು ತಡೆಗಟ್ಟಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ವಿಧೇಯಕ ಅನುಕೂಲವಾಗಲಿದೆ.
ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ವಿಷಯ, ರಾಜಕೀಯ ಕಾರಣಗಳಿಂದಾಗಿ ದ್ವೇಷ ಭಾಷಣದಿಂದ ಅನೇಕ ಬಡ ಕುಟುಂಬದ ಯುವಕರು ಬಲಿಯಾಗುತ್ತಿದ್ದರು. ಇಂತಹ ಸಂದರ್ಭ ಈ ರೀತಿಯ ಮಸೂದೆಯ ಅನಿವಾರ್ಯವಾಯಿತೆ ಬಗ್ಗೆ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿದ್ದೆ. ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಹಾಸ್ ಶೆಟ್ಟಿ ಹಾಗೂ ಅಬ್ದುಲ್ ರಹಿಮಾನ್ ಹತ್ಯೆಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ನೇಮಕವಾದ ಸತ್ಯಶೋಧನಾ ಸಮಿತಿ ದಕ್ಷಿಣ ‌ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭ ದ್ವೇಷ ಭಾಷಣ ವಿರುದ್ಧ ಕಠಿಣ ಕಾನೂನು ತರುವ ಬಗ್ಗೆ ಚಿಂತಿಸಲಾಗುವುದು ಎಂಬ ಆಶ್ವಾಸನೆ ನೀಡಲಾಗಿತ್ತು. ಆ ಪ್ರಕಾರ ಇದೀಗ ಮಸೂದೆಗೆ ರಾಜ್ಯ ಸರ್ಕಾರದಿಂದ ಅಂಗೀಕಾರ ದೊರೆತ್ತಿರುವುದು ಶ್ಲಾಘನೀಯ‌. ಮುಂದಿನ ದಿನಗಳಲ್ಲಿ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲು ಮತ್ತಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು