4:22 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ದ್ವೇಷ ಭಾಷಣ ವಿಧೇಯಕ ಸಹಕಾರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

20/12/2025, 20:47

ಮಂಗಳೂರು(reporterkarnataka.com): ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಮಂಡನೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ಮತ್ತು ರಾಜಕೀಯ ವಿಚಾರಗಳಲ್ಲಿ ಸಂಘರ್ಷ ಸೃಷ್ಟಿಸುವ ಮಾತುಗಳು ಹೆಚ್ಚಾಗುತ್ತಿವೆ. ಭಾಷಣ ಕೇಳಿ ಕೊಲೆ ಯತ್ನ ಮಾಡಿದ್ದಾರೆ. ಯುವಕರನ್ನು ಪ್ರಚೋದಿಸುವ ಕಾರ್ಯ ಹೆಚ್ಚಾಗುವ ಈ ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯ ಕಾಪಾಡುವುದು ಮತ್ತು ದ್ವೇಷ ಭಾಷಣದಿಂದ ಉಂಟಾಗುವ ಸಂಘರ್ಷಗಳನ್ನು ತಡೆಗಟ್ಟಲು ಈ ವಿಧೇಯಕ ತುಂಬಾ ಸಹಕಾರಿಯಾಗಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸಾರ ಅಥವಾ ಪ್ರಚಾರ ಹಾಗೂ ಅಪರಾಧಗಳನ್ನು ತಡೆಗಟ್ಟಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ವಿಧೇಯಕ ಅನುಕೂಲವಾಗಲಿದೆ.
ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ವಿಷಯ, ರಾಜಕೀಯ ಕಾರಣಗಳಿಂದಾಗಿ ದ್ವೇಷ ಭಾಷಣದಿಂದ ಅನೇಕ ಬಡ ಕುಟುಂಬದ ಯುವಕರು ಬಲಿಯಾಗುತ್ತಿದ್ದರು. ಇಂತಹ ಸಂದರ್ಭ ಈ ರೀತಿಯ ಮಸೂದೆಯ ಅನಿವಾರ್ಯವಾಯಿತೆ ಬಗ್ಗೆ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿದ್ದೆ. ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಹಾಸ್ ಶೆಟ್ಟಿ ಹಾಗೂ ಅಬ್ದುಲ್ ರಹಿಮಾನ್ ಹತ್ಯೆಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ನೇಮಕವಾದ ಸತ್ಯಶೋಧನಾ ಸಮಿತಿ ದಕ್ಷಿಣ ‌ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭ ದ್ವೇಷ ಭಾಷಣ ವಿರುದ್ಧ ಕಠಿಣ ಕಾನೂನು ತರುವ ಬಗ್ಗೆ ಚಿಂತಿಸಲಾಗುವುದು ಎಂಬ ಆಶ್ವಾಸನೆ ನೀಡಲಾಗಿತ್ತು. ಆ ಪ್ರಕಾರ ಇದೀಗ ಮಸೂದೆಗೆ ರಾಜ್ಯ ಸರ್ಕಾರದಿಂದ ಅಂಗೀಕಾರ ದೊರೆತ್ತಿರುವುದು ಶ್ಲಾಘನೀಯ‌. ಮುಂದಿನ ದಿನಗಳಲ್ಲಿ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲು ಮತ್ತಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು