7:25 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು